ವಿಧಾನ ಪರಿಷತ್ನಲ್ಲಿ ಸೋಮವಾರ ಬಿಜೆಪಿಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮತ್ತು ರಘುನಾಥ ಮಲ್ಕಾಪುರೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಆಹಾರ ಸುರಕ್ಷತಾ ಅಧಿಕಾರಿಗಳು ಆಹಾರ ಪದಾರ್ಥಗಳನ್ನು ನಿರಂತರವಾಗಿ ತಪಾಸಣೆ ನಡೆಸುತ್ತಿದ್ದಾರೆ. ಸಂಶಯಾಸ್ಪದ ಪದಾರ್ಥಗಳ ಮಾದರಿ ಸಂಗ್ರಹಿಸಿ ಪ್ರಯೋಗಾಲಯಗಳಲ್ಲಿ ಪರೀಕ್ಷೆ ನಡೆಸುತ್ತಾರೆ. ಮಾರುಕಟ್ಟೆಯಲ್ಲಿ ಇತ್ತೀಚೆಗೆ ಪ್ಲಾಸ್ಟಿಕ್ ಅಕ್ಕಿ, ಸಕ್ಕರೆ, ಮೊಟ್ಟೆ ಪೂರೈಕೆಯಾಗುತ್ತಿದೆ ಎನ್ನುವುದು ವದಂತಿ’ ಎಂದೂ ಅವರು ಸ್ಪಷ್ಟಪಡಿಸಿದರು.