ಕೇಂದ್ರ ಗೃಹ ಇಲಾಖೆಯ ರಾಜ್ಯ ಖಾತೆ ಸಚಿವ ಕಿರಣ್ ರಿಜಿಜು ಅವರೊಂದಿಗೆ ಇಲ್ಲಿ ಪತ್ರಿಕಾಗೋಷ್ಟಿ ನಡೆಸಿದ ರಾಜ್ನಾಥ್ ಸಿಂಗ್, ‘ಕೇಂದ್ರ ಸರ್ಕಾರ ದೇಶದ ಯಾವೊಬ್ಬ ವ್ಯಕ್ತಿಯ ಆಹಾರದ ಆಯ್ಕೆಯ ಮೇಲೆ ನಿರ್ಬಂಧ ವಿಧಿಸುವುದಿಲ್ಲ’ ಎಂದು ಹೇಳಿದ್ದಾರೆ. ಇದಕ್ಕೂ ಮೊದಲು ಕೇಂದ್ರ ಗ್ರಾಮೀಣ ಅಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಇಂತಹದೇ ಭರವಸೆ ನೀಡಿದ್ದರು.