ಕಲ್ಲಡ್ಕದಲ್ಲಿ ಮುಖಾಮುಖಿಯಾದ ರತ್ನಾಕರ ಶೆಟ್ಟಿ ಮತ್ತು ಖಲೀಲ್ ಪರಸ್ಪರರನ್ನು ದುರುಗುಟ್ಟಿ ನೋಡಿರುವುದೇ ಘಟನೆಗೆ ಕಾರಣ ಎನ್ನಲಾಗಿದೆ. ಇಬ್ಬರ ನಡುವೆ ಆರಂಭವಾದ ಜಗಳ ಘರ್ಷಣೆಗೆ ತಿರುಗಿದೆ. ನಂತರ ಎರಡು ಗುಂಪುಗಳು ಪರಸ್ಪರ ಕಾದಾಟಕ್ಕೆ ಇಳಿದಿದ್ದು, ರತ್ನಾಕರ ಶೆಟ್ಟಿ ಮತ್ತು ಖಲೀಲ್ ಚೂರಿ ಇರಿತದಿಂದ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಎರಡೂ ಗುಂಪುಗಳು ಪರಸ್ಪರರ ವಿರುದ್ಧ ದೂರು ನೀಡಿದ್ದು, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.