ಈ ಮಧ್ಯೆ, ಉದ್ಘಾಟನೆ ಬಳಿಕ ಮೆಟ್ರೊ ರೈಲಿನಲ್ಲಿ ಪ್ರಧಾನಿ ಜತೆ ಪ್ರಯಾಣಿಸಲಿರುವವರ ಪಟ್ಟಿಯನ್ನು ಪರಿಷ್ಕರಿಸುವಂತೆ ಪ್ರಧಾನಿ ಕಾರ್ಯಾಲಯಕ್ಕೆ ಕೇರಳ ಸರ್ಕಾರ ಪತ್ರ ಬರೆದಿದೆ. ಇ. ಶ್ರೀಧರನ್, ಪ್ರತಿಪಕ್ಷ ನಾಯಕ ರಮೇಶ್ ಚೆನ್ನಿತಲ, ಮತ್ತು ಕೊಚ್ಚಿಯ ಸಂಸದರನ್ನು ಗಣ್ಯರ ಸಾಲಿನಲ್ಲಿ ಸೇರಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.