‘ಹೋಟೆಲ್, ಗೂಡಂಗಡಿ ಸೇರಿದಂತೆ ಎಲ್ಲ ಕಡೆಗಳಲ್ಲಿ ಸಾರಾಯಿ ಸಿಗುತ್ತಿದೆ. ಅದರಿಂದ ಮಹಿಳೆಯರಿಗೆ, ಹೆಣ್ಣು ಮಕ್ಕಳಿಗೆ ತೊಂದರೆಯಾಗುತ್ತಿದೆ. ಅದನ್ನು ನಿಯಂತ್ರಿಸಲು ಕಾನೂನು ತೊಡಕಿದೆಯೇ ಎಂಬುದು ಗೊತ್ತಿಲ್ಲ. ಮುಂದಿನ ಚುನಾವಣಾ ಪ್ರಣಾಳಿಕೆಯಲ್ಲಿ ಸಾರಾಯಿ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ’ ಎಂದು ಅವರು ಭವಿಷ್ಯ ನುಡಿದರು.