‘ಶಸ್ತ್ರಚಿಕಿತ್ಸೆಗೆ ಒಳಗಾದ ನಾಯಿಗೆ 1 ವಾರ ಆರೈಕೆ ಮಾಡಬೇಕು. ಗಾಯ ವಾಸಿಯಾದ ನಂತರವೇ ಹೊರಗೆ ಬಿಡಬೇಕು. ಇಲ್ಲವಾದರೆ, ಅದು ಕಸದ ರಾಶಿಯಲ್ಲಿ ಮಲಗುವುದರಿಂದ ಗಾಯ ಉಲ್ಬಣಿಸಿ ಪ್ರಾಣಕ್ಕೇ ಕುತ್ತು ಬರುತ್ತದೆ. ಸಾಕಷ್ಟು ನೋಟಿಸ್ ಕೊಟ್ಟರೂ ಟ್ರಸ್ಟ್ನವರು ಎಚ್ಚೆತ್ತುಕೊಳ್ಳಲಿಲ್ಲ. ಹೀಗಾಗಿ, ಠಾಣೆ ಮೆಟ್ಟಿಲೇರಿದ್ದೇನೆ’ ಎಂದು ನವೀನಾ ಹೇಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.