ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರಶೈವ ಲಿಂಗಾಯತ ಧರ್ಮ ಘೋಷಣೆಗೆ ಶಿಫಾರಸು: ಸಿಎಂ

Last Updated 14 ಜೂನ್ 2017, 20:16 IST
ಅಕ್ಷರ ಗಾತ್ರ

ಬೆಂಗಳೂರು: ‘ವೀರಶೈವ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮವೆಂದು ಘೋಷಿಸುವಂತೆ  ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ನಗರದ ಅರಮನೆ ಮೈದಾನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ  ಮಾತನಾಡಿದರು.

‘ವೀರಶೈವ ಧರ್ಮ, ಲಿಂಗಾಯತ ಧರ್ಮ ಎಂಬ ಜಿಜ್ಞಾಸೆ ಇದೆ. ಸರಿಯಾದ ಹೆಸರು ಯಾವುದು’ ಎಂದು ವೇದಿಕೆ ಮೇಲಿದ್ದವರನ್ನು ಪ್ರಶ್ನಿಸಿದರು.
ಆಗ ಪೌರಾಡಳಿತ ಸಚಿವ ಈಶ್ವರ ಖಂಡ್ರೆ ಅವರು, ‘ವೀರಶೈವ ಲಿಂಗಾಯತ ಧರ್ಮ’ ಎಂದು ಉತ್ತರಿಸಿದರು.

‘ಸರಿ, ಕೇಂದ್ರಕ್ಕೆ ಶಿಫಾರಸು ಮಾಡುವ ಸಂದರ್ಭದಲ್ಲಿ ಸಮುದಾಯದ ಮುಖಂಡರ ಜತೆ ಚರ್ಚಿಸಿ ಒಮ್ಮತದ ಹೆಸರನ್ನು ಉಲ್ಲೇಖಿಸುತ್ತೇನೆ’ ಎಂದು ತಿಳಿಸಿದರು.

ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಮಾತನಾಡಿ, ‘ಕೂಡಲ ಸಂಗಮದಲ್ಲಿ ವಚನ ಸಾಹಿತ್ಯ ಅಧ್ಯಯನ ಪೀಠ ಸ್ಥಾಪಿಸಬೇಕು. ಸಮುದಾಯದಲ್ಲಿ 60 ಉಪ ಜಾತಿಗಳಿದ್ದು, ಅವುಗಳನ್ನು ವೀರಶೈವ ಧರ್ಮಕ್ಕೆ ಸೇರಿಸಲು ಕ್ರಮ ಕೈಗೊಳ್ಳಬೇಕು. ಶರಣ ಅರಳಯ್ಯ ಅವರ ಸ್ಮಾರಕ ಭವನ ನಿರ್ಮಿಸಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT