ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಟೆಗಾರರು ಹಾರಿಸಿದ ಗುಂಡು ತಗುಲಿ ಯುವಕ ಸಾವು

Last Updated 15 ಜೂನ್ 2017, 8:53 IST
ಅಕ್ಷರ ಗಾತ್ರ

ಉಡುಪಿ: ಶಿಕಾರಿಗೆ ಬಂದಿದ್ದ ಯುವಕರು ಹಾರಿಸಿದ ಗುಂಡು ತಗುಲಿ ರವಿ (32) ಎಂಬುವರು ಮೃತಪಟ್ಟಿರುವ ಘಟನೆ ಕಾರ್ಕಳ ತಾಲ್ಲೂಕಿನ ಕಡ್ತಲ ಅರಣ್ಯದಲ್ಲಿ ಬುಧವಾರ ರಾತ್ರಿ ನಡೆದಿದೆ.

ಆರೋಪಿಗಳಾದ ಸುಂದರ ನಾಯ್ಕ ಮತ್ತು ಜಿತು ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ.

ಮರ ಕಡಿಯಲು ಬಂದಿದ್ದ ರವಿ, ಶಿಕಾರಿಗೆ ಬಂದಿದ್ದವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಎಂದು ಭಾವಿಸಿ ಅಲ್ಲಿಂದ ಓಡಲು ಪ್ರಯತ್ನಿಸಿದ್ದಾರೆ. ಪ್ರಾಣಿಯೇ ಓಡುತ್ತಿರಬೇಕು ಎಂಬ ಭಾವಿಸಿದ ಯುವಕರು ಹಾರಿಸಿದ ಗುಂಡು ತಗುಲಿ ಮೃತಪಟ್ಟಿದ್ದಾರೆ.

ಮರ ಕಡಿಯಲು ತಂದಿದ್ದ ಗರಗಸ ಮುಂತಾದ ಆಯುಧಗಳನ್ನು ಅಜೆಕಾರು ಪೊಲೀಸರು ಜಪ್ತಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT