ಬರ್ಮಿಂಗ್ಹ್ಯಾಮ್: ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಬಳಿಕ ಜೂನ್ 23ರಿಂದ ಭಾರತ– ವೆಸ್ಟ್ ಇಂಡೀಸ್ ನಡುವೆ 5 ಏಕದಿನ ಹಾಗೂ 1 ಟಿ–20 ಪಂದ್ಯದ ಕ್ರಿಕೆಟ್ ಸರಣಿ ಆರಂಭವಾಗಲಿದೆ.
ಈ ಸರಣಿಗೆ ಟೀಂ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಹಾಗೂ ಜಸ್ಪ್ರೀತ್ ಬೂಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಇವರ ಸ್ಥಾನಕ್ಕೆ ಯುವ ಆಟಗಾರರಾದ ರಿಷಬ್ ಪಂತ್ ಹಾಗೂ ಚೀನಾಮನ್ ಕುಲದೀಪ್ ಯಾದವ್ಗೆ ಅವಕಾಶ ನೀಡಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆಯ್ಕೆ ಸಮಿತಿಯ ಅಧ್ಯಕ್ಷ ಎಂ.ಎಸ್.ಕೆ ಪ್ರಸಾದ್ ತಿಳಿಸಿದ್ದಾರೆ.
ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಶಿಖರ್ ಧವನ್ ಜತೆಗೆ ರಹಾನೆ ಅಥವಾ ರಿಷಬ್ ಪಂತ್ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.