ಈ ಕುರಿತು 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶಾಂತಗೌಡ ಹಾಗೂ ಚಿತ್ತಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್ ಬನ್ನಿಕಟ್ಟಿ, 'ಮೊಬೈಲ್ ಮೂಲಕ ಯುವಕರು ಪ್ರಶ್ನೆ ಪತ್ರಿಕೆಯ ಫೋಟೊ ತೆಗೆದು ವಾಟ್ಸ್ ಆ್ಯಪ್ನಲ್ಲಿ ಹರಿಬಿಟ್ಟಿರುವುದು ತಿಳಿದು ಬಂದಿದೆ. ಪ್ರಶ್ನೆ ಪತ್ರಿಕೆ ಕೊಟ್ಟಿರುವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲು ಸೂಚಿಸಲಾಗಿದೆ. ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು' ಎಂದು ತಿಳಿಸಿದರು.