ಈ ಕುರಿತು ಟ್ವೀಟರ್ ಮೂಲಕ ಪ್ರತಿಕ್ರಿಯಿಸಿರುವ ವಿಶ್ವಸಂಸ್ಥೆಯನ್ನು ಪ್ರತಿನಿಧಿಸುವ ಭಾರತದ ಖಾಯಂ ಪ್ರತಿನಿಧಿ ಸಯ್ಯದ್ ಅಕ್ಬರುದ್ದೀನ್ ಅವರು, ‘ಮತ್ತೊಂದು ದಿನ, ಮತ್ತೊಂದು ಚುನಾವಣೆ, ಭಾರತ ಮತ್ತೆ ಗೆದ್ದಿದೆ. ಬೆಂಬಲ ನೀಡಿದ ವಿಶ್ವಸಂಸ್ಥೆಯ ಎಲ್ಲಾ ಸದಸ್ಯ ರಾಷ್ಟ್ರಗಳಿಗೂ ಧನ್ಯವಾದಗಳು. ಭಾರತ ಮತ್ತೆ ಸಾಮಾಜಿಕ ಆರ್ಥಿಕ ಮಂಡಳಿಗೆ ಆಯ್ಕೆಯಾಗಿದೆ’ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.