ರಮಣದೀಪ್ ಎರಡು, ಆಕಾಶ್ ದೀಪ್ ಸಿಂಗ್ ಮತ್ತು ಹರ್ಮನ್ಪ್ರೀತ್ ಸಿಂಗ್ ತಲಾ ಒಂದೊಂದು ಗೋಲು ಗಳಿಸಿದ್ದರು. ಮೊದಲ ಪಂದ್ಯದಲ್ಲಿ ಮಾಡಿದ ತಪ್ಪನ್ನು ಪುನರಾವರ್ತಿಸದೆ ಶನಿವಾರ ಆಡಿದರೆ ತಂಡ ಕ್ವಾರ್ಟರ್ ಫೈನಲ್ ಹಂತಕ್ಕೆ ಏರುವ ಕನಸು ಜೀವಂತವಾಗಿರಿಸಿಕೊಳ್ಳಬಹುದು.
ರೂಪಿಂದರ್ ಪಾಲ್ ಸಿಂಗ್ ಅವರ ಅನುಪಸ್ಥಿತಿಯಲ್ಲಿ ಕೋತಾಜಿತ್ ಸಿಂಗ್ ಮತ್ತು ಹರ್ಮನ್ಪ್ರೀತ್ ಸಿಂಗ್ ಭಾರತದ ರಕ್ಷಣಾ ವಿಭಾಗದ ಹೊಣೆ ಹೊತ್ತಿದ್ದಾರೆ. ಪಾಕಿಸ್ತಾನ ಮತ್ತು ನೆದರ್ಲೆಂಡ್ಸ್ ವಿರು ದ್ಧದ ಪಂದ್ಯಗಳಲ್ಲಿ ಗಮನ ಸೆಳೆ ಯಲು ಶುಕ್ರವಾರದ ಪಂದ್ಯವನ್ನು ಇವರಿಬ್ಬರು ಸದುಪಯೋಗ ಪಡಿಸಿಕೊಳ್ಳಬೇಕಾಗಿದೆ.