ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸಿಗೆಗಳ ಕೊರತೆ: ನೆಲವೇ ಆಸರೆ!

ನೆಲಮಂಗಲ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯಿಂದ ರೋಗಿಗಳ ಪರದಾಟ
Last Updated 16 ಜೂನ್ 2017, 19:52 IST
ಅಕ್ಷರ ಗಾತ್ರ

ನೆಲಮಂಗಲ: ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ 19 ಮಹಿಳೆಯರನ್ನು ನೆಲದ ಮೇಲೆ ಮಲಗಿಸಲಾಗಿದೆ.

ಇದು ನೂರು ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆ. ಆದರೆ, ಈಗ 40 ಹಾಸಿಗೆಗಳು ಮಾತ್ರ ಇವೆ. ಹಾಸಿಗೆಗಳ ಕೊರತೆಯಿಂದಾಗಿ ರೋಗಿಗಳನ್ನು ನೆಲದ ಮೇಲೆ ಮಲಗಿಸಲಾಗುತ್ತಿದೆ. ಇಲ್ಲಿ ರೋಗಿಗಳ ಸಂಬಂಧಿಕರಿಗೆ ವಿಶ್ರಾಂತಿ ಕೊಠಡಿಯೂ ಇಲ್ಲ ಎಂದು ಸ್ಥಳೀಯರು ದೂರಿದ್ದಾರೆ.

‘ಸ್ಥಳೀಯ ಶಾಸಕ ಡಾ.ಕೆ. ಶ್ರೀನಿವಾಸಮೂರ್ತಿ ಇದೇ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ. ಆಸ್ಪತ್ರೆಯಲ್ಲಿರುವ ಕುಂದುಕೊರತೆಗಳನ್ನು ನಿವಾರಿಸಲು ಅವರು ವಿಫಲರಾಗಿದ್ದಾರೆ. ಸಮರ್ಪಕ ಸೌಲಭ್ಯಗಳನ್ನು ಕಲ್ಪಿಸಿಲ್ಲ’ ಎಂದು ರೋಗಿಗಳ ಸಂಬಂಧಿಕರು ಆರೋಪಿಸಿದ್ದಾರೆ.

‘ತುರ್ತು ನಿಗಾ ಘಟಕ ಮತ್ತು ಡಯಾಲಿಸಿಸ್‌ ಕೇಂದ್ರದ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇದರಿಂದ ರೋಗಿಗಳಿಗೆ ತೊಂದರೆ ಉಂಟಾಗುತ್ತಿದೆ. ಕಾಮಗಾರಿಯು ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ. ಬಳಿಕ ಹಾಸಿಗೆ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳುತ್ತೇವೆ’ ಎಂದು ತಾಲ್ಲೂಕಿನ ವೈದ್ಯಾಧಿಕಾರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT