ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿವಾರಿ ಸಾವು:ಎಫ್‌ಐಆರ್‌ ದಾಖಲಿಸಿದ ಸಿಬಿಐ

Last Updated 16 ಜೂನ್ 2017, 20:10 IST
ಅಕ್ಷರ ಗಾತ್ರ

ಬೆಂಗಳೂರು:  ಕರ್ನಾಟಕ ಕೇಡರ್‌ನ ಐಎಎಸ್‌ ಅಧಿಕಾರಿ ಅನುರಾಗ್‌ ತಿವಾರಿ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ. ಈ ಸಂಬಂಧ ಶುಕ್ರವಾರ ಎಫ್‌ಐಆರ್‌ ದಾಖಲಾಗಿದೆ.

ಅನುರಾಗ್‌ ತಿವಾರಿ ಸಹೋದರ ಮಯಾಂಕ್‌ ತಿವಾರಿ ನೀಡಿದ್ದ ದೂರು ಆಧರಿಸಿ  ದೆಹಲಿ ಕಚೇರಿಯಲ್ಲಿ  ಎಫ್‌ಐಆರ್‌ ದಾಖಲಾಗಿದೆ.
ಮೇ 17ರಂದು ಅನುರಾಗ್‌ ತಿವಾರಿ  ಮೃತಪಟ್ಟಿದ್ದರು. ಸಾವಿನಲ್ಲಿ ಅನುಮಾನವಿದೆ ಎಂದು ಕುಟುಂಬದವರು ದೂರು ಕೊಟ್ಟಿದ್ದರು.

ಬಳಿಕ ಉತ್ತರ ಪ್ರದೇಶ ಸರ್ಕಾರವು ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೇಂದ್ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಸಚಿವಾಲಯಕ್ಕೆ ಪತ್ರ ಬರೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT