ರಾಜಾಜಿನಗರ, ಮಲ್ಲೇಶ್ವರ, ವಿಜಯನಗರ, ಎಂ.ಜಿ.ರಸ್ತೆ. ಶಿವಾಜಿನರ, ಯಶವಂತಪುರ, ಪೀಣ್ಯ, ಬಸವನಗುಡಿ, ಮೆಜೆಸ್ಟಿಕ್ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆಯಾಗಿದೆ.
ಮಳೆ ವೇಳೆ ಗಾಳಿಯೂ ಜೋರಾಗಿ ಬೀಸಿದ್ದು, ಅದರಿಂದಾಗಿ ವಿಧಾನಸೌಧ ಹಿಂಭಾಗದ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಕಟ್ಟಡದ ಬಳಿ ಮರವೊಂದು ಉರುಳಿ ಬಿದ್ದಿತು. ಸ್ಥಳಕ್ಕೆ ಹೋದ ಬಿಬಿಎಂಪಿ ಸಿಬ್ಬಂದಿ, ಮರವನ್ನು ತೆರವುಗೊಳಿಸಿದರು.