ಆಕಾಶವಾಣಿ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡುತ್ತಾ, ‘ಗೋಹತ್ಯೆ ಕುರಿತಂತೆ ಕೆಲ ಮಾಧ್ಯಮಗಳು ಚರ್ಚೆಗಳನ್ನು ಆರಂಭಿಸಿವೆ. ಕೇಂದ್ರ ಸರ್ಕಾರ ಭಾರತವನ್ನು ಸಸ್ಯಹಾರಿ ರಾಷ್ಟ್ರವನ್ನಾಗಿ ಮಾರ್ಪಡಿಸಲು ಹೊರಡಿದೆಯೇ ಎಂಬುದರ ಬಗ್ಗೆಯೂ ಚರ್ಚೆ ನಡೆಸುತ್ತಿವೆ. ಗೋಹತ್ಯೆ ಕುರಿತಂತೆ ತಪ್ಪು ಮಾಹಿತಿಗಳನ್ನು ರವಾನಿಸಲಾಗುತ್ತಿದೆ’ ಎಂದು ಆರೋಪಿಸಿದರು.