‘ವಾಣಿಜ್ಯ ಉದ್ದೇಶಕ್ಕೆ ಉದ್ಯಾನದ ಜಾಗ ನೀಡಬಾರದು. ಮೂಲಸೌಕರ್ಯಗಳನ್ನು ಒದಗಿಸಿ ಉದ್ಯಾನದ ಜಾಗದ ಸುತ್ತಲೂ ತಡೆಗೋಡೆ ನಿರ್ಮಿಸಬೇಕು. ಉದ್ಯಾನಕ್ಕೆ ಬರುವ ಮಹಿಳೆಯರಿಗೆ ಭದ್ರತೆ ಇಲ್ಲದಂತಾಗಿದೆ. ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ. ಇದಕ್ಕೆಲ್ಲ ಕಡಿವಾಣ ಹಾಕಲು ಸೂಕ್ತ ಭದ್ರತೆ ಹಾಗೂ ಸಿಸಿಟಿವಿ ಕ್ಯಾಮೆರಾಗಳನ್ನು ಕಲ್ಪಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಬೇಕು’ ಎಂದು ಅವರು ಒತ್ತಾಯಿಸಿದರು.