ಬಾಲಕಿಯನ್ನು ಆಕೆಯ ಮನೆಯ ಸಮೀಪದಿಂದ ಅಪಹರಿಸಿದ 6–7 ಮಂದಿ ದುಷ್ಕರ್ಮಿಗಳು ಆಕೆಯನ್ನು ಖಾಲಿ ಮೈದಾನಕ್ಕೆ ಕರೆದುಕೊಂಡು ಅತ್ಯಾಚಾರ ಎಸಗಿದ್ದಾರೆ. ಈ ವೇಳೆ ಬಾಲಕಿ ಪ್ರಜ್ಞೆ ತಪ್ಪಿದ್ದಾಳೆ. ಆಕೆಗೆ ಪ್ರಜ್ಞೆ ಬಂದಾಗ ತಾನು ರೈಲಿನಲ್ಲಿರುವುದು ತಿಳಿದಿದೆ. ಅಷ್ಟರಲ್ಲಿ ಪಕ್ಕದಲ್ಲಿದ್ದ ಇಬ್ಬರು ಚಲಿಸುತ್ತಿದ್ದ ರೈಲಿನಿಂದ ಬಾಲಕಿಯನ್ನು ಹಿಡಿದುಕೊಂಡು ಹೊರಗೆ ಎಸೆದಿದ್ದಾರೆ.
ಕೃತ್ಯ ಎಸಗಿರುವ ಬಾಲಕರು ಅಪ್ರಾಪ್ತರು ಎನ್ನಲಾಗಿದೆ. ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ದುಷ್ಕೃತ್ಯ ಎಸಗಿದ ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭರವಸೆ ನೀಡಿದ್ದಾರೆ.