ರಾಯಚೂರು: ಜಿಲ್ಲೆಯಲ್ಲಿ ಆಧಾರ್ ನೋಂದಣಿ ಮಾಡಿಕೊಳ್ಳದೆ ಬಾಕಿ ಉಳಿದವರ ನೋಂದಣಿಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹೇಳಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬೆಂಗಳೂರಿನ ಇ–ಆಡಳಿತ ಕೇಂದ್ರ ಹಾಗೂ ಜಿಲ್ಲಾಡಳಿತದಿಂದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ, ಸಿಬ್ಬಂದಿಗೆ ಆಧಾರ್ ನೋಂದಣಿ, ಸೀಡಿಂಗ್ ಹಾಗೂ ಆಧಾರ್ಗೆ ಸಂಬಂಧಿಸಿದ ಸೇವೆಗಳ ಬಗ್ಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾಮಟ್ಟದ ಆಧಾರ್ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.