ಇತ್ತೀಚೆಗೆ ರಾಮ್ಪುರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಅಜಂ ಖಾನ್, ‘ಕೆಲವು ಪ್ರದೇಶಗಳಲ್ಲಿ ಮಹಿಳೆಯರು ಯೋಧರ ಗುಪ್ತಾಂಗ ಕತ್ತರಿಸುತ್ತಿದ್ದಾರೆ. ಕಾಶ್ಮೀರ, ತ್ರಿಪುರಾ, ಜಾರ್ಖಂಡ್, ಬಂಗಾಳ ಮತ್ತಿತರ ಕಡೆಗಳಲ್ಲಿ ಅವಮಾನಕರ ಹಿಂಸೆ ನಡೆಯುತ್ತಿದೆ’ ಎಂದು ಹೇಳಿದ್ದರು. ಇದಕ್ಕೆ ವಿಶ್ವ ಹಿಂದು ಪರಿಷತ್ ಮತ್ತು ಭಜರಂಗದಳ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ, ಪ್ರತಿಭಟನೆಯನ್ನೂ ನಡೆಸಿದ್ದವು.