ಅನಿಲ್ ಕುಂಬ್ಳೆ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ವೀರೇಂದ್ರ ಸೆಹ್ವಾಗ್, ಟಾಮ್ ಮೂಡಿ, ಲಾಲ್ಚಂದ್ ರಜಪೂತ್, ರಿಚರ್ಡ್ ಪೈಬಸ್ ಮತ್ತು ದೊಡ್ಡ ಗಣೇಶ್ ಅವರು ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ಭಾರತ ತಂಡದ ನಿರ್ದೇಶಕರಾಗಿದ್ದ ರವಿಶಾಸ್ತ್ರಿ ಅವರೂ ಅರ್ಜಿ ಹಾಕಲಿದ್ದಾರೆ ಎನ್ನಲಾಗಿದೆ. ಸಚಿನ್ ತೆಂಡೂಲ್ಕರ್ ಮತ್ತು ವಿವಿಎಸ್ ಲಕ್ಷ್ಮಣ್ ಅವರೂ ಸಲಹಾ ಸಮಿತಿಯಲ್ಲಿದ್ದಾರೆ.