ವಿಜಯಪುರ: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಎ.ಬಿ.ಸಿ.ಡಿ ಗೊತ್ತಿಲ್ಲ. ಯಾರೋ ಚಿಲ್ಲರೆ ಜನ ಚೀಟಿಯಲ್ಲಿ ಬರೆದುಕೊಟ್ಟಿದ್ದನ್ನು ಹೇಳುತ್ತಿದ್ದಾರೆ. ಅವರು ಏಕವಚನದಲ್ಲಿ ನಿಂದಿಸುವುದನ್ನು ನಿಲ್ಲಿಸದಿದ್ದರೆ ನಾನೂ ಅವರ ವೈಯಕ್ತಿಕ, ರಾಜಕೀಯ ಜೀವನದ ಬಗ್ಗೆ ಏಕವಚನದಲ್ಲಿ ಮಾತನಾಡಬೇಕಾಗುತ್ತದೆ ಎಂದು ಸಚಿವ ಎಂ.ಬಿ. ಪಾಟೀಲ ಎಚ್ಚರಿಸಿದರು.