<p><strong>ಶ್ರೀರಂಗಪಟ್ಟಣ: </strong>ಕಾರಿನಲ್ಲಿ ಕುಳಿತಿದ್ದಾಗ ಕತ್ತಿನಲ್ಲಿದ್ದ 60 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತು ಓಡಿದ ಕಿಡಿಗೇಡಿಯನ್ನು ಮಹಿಳೆಯೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.<br /> ಸಮೀಪದ ಗಂಜಾಂ ನಿಮಿಷಾಂಬಾ ದೇವಾಲಯಕ್ಕೆ ಶನಿವಾರ ಕುಟುಂಬ ಸದಸ್ಯರ ಜತೆ ಬಂದಿದ್ದ ಬೆಂಗಳೂರು ಮಹಾಲಕ್ಷ್ಮಿಪುರಂನ ಸುರೇಶ್ಕುಮಾರ್ ಅವರ ಪತ್ನಿ ನವ್ಯಾ (23) ಈ ಸಾಹಸ ಮಾಡಿದವರು.</p>.<p>ಪಾಂಡವಪುರ ತಾಲ್ಲೂಕು ಸಣಬ ಗ್ರಾಮದ ರಾಜು ಎಂಬವರ ಮಗ ನವೀನ್ಕುಮಾರ್ (25) ಸಿಕ್ಕಿಬಿದ್ದವ. ನವ್ಯಾ ಆರೋಪಿಯನ್ನು ಹಿಡಿದ ಕೂಡಲೇ ಸುತ್ತಲು ಇದ್ದ ಜನರು ಹಾಗೂ ವ್ಯಾಪಾರಿಗಳು ನವೀನ್ಕುಮಾರ್ನನ್ನು ಮನಸೋ ಇಚ್ಛೆ ಥಳಿಸಿದ್ದಾರೆ. ಎಸ್ಐ ಯೋಗಾಂಜನಪ್ಪ ಸ್ಥಳಕ್ಕೆ ಬಂದು ಆರೋಪಿಯನ್ನು ವಶಕ್ಕೆ ಪಡೆದರು.</p>.<p>ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದರು. ಎಂ.ಎ. ಪದವೀಧರನಾಗಿರುವ ಆರೋಪಿ ನವೀನ್ಕುಮಾರ್ 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದಾನೆ. ಹಣಕಾಸಿನ ಮುಗ್ಗಟ್ಟಿನಿಂದಾಗಿ ಈ ಕೃತ್ಯಕ್ಕೆ ಯತ್ನಿಸಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯ ಸಾಹಸಕ್ಕೆ ಪೊಲೀಸರು ಹಾಗೂ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ: </strong>ಕಾರಿನಲ್ಲಿ ಕುಳಿತಿದ್ದಾಗ ಕತ್ತಿನಲ್ಲಿದ್ದ 60 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತು ಓಡಿದ ಕಿಡಿಗೇಡಿಯನ್ನು ಮಹಿಳೆಯೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.<br /> ಸಮೀಪದ ಗಂಜಾಂ ನಿಮಿಷಾಂಬಾ ದೇವಾಲಯಕ್ಕೆ ಶನಿವಾರ ಕುಟುಂಬ ಸದಸ್ಯರ ಜತೆ ಬಂದಿದ್ದ ಬೆಂಗಳೂರು ಮಹಾಲಕ್ಷ್ಮಿಪುರಂನ ಸುರೇಶ್ಕುಮಾರ್ ಅವರ ಪತ್ನಿ ನವ್ಯಾ (23) ಈ ಸಾಹಸ ಮಾಡಿದವರು.</p>.<p>ಪಾಂಡವಪುರ ತಾಲ್ಲೂಕು ಸಣಬ ಗ್ರಾಮದ ರಾಜು ಎಂಬವರ ಮಗ ನವೀನ್ಕುಮಾರ್ (25) ಸಿಕ್ಕಿಬಿದ್ದವ. ನವ್ಯಾ ಆರೋಪಿಯನ್ನು ಹಿಡಿದ ಕೂಡಲೇ ಸುತ್ತಲು ಇದ್ದ ಜನರು ಹಾಗೂ ವ್ಯಾಪಾರಿಗಳು ನವೀನ್ಕುಮಾರ್ನನ್ನು ಮನಸೋ ಇಚ್ಛೆ ಥಳಿಸಿದ್ದಾರೆ. ಎಸ್ಐ ಯೋಗಾಂಜನಪ್ಪ ಸ್ಥಳಕ್ಕೆ ಬಂದು ಆರೋಪಿಯನ್ನು ವಶಕ್ಕೆ ಪಡೆದರು.</p>.<p>ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದರು. ಎಂ.ಎ. ಪದವೀಧರನಾಗಿರುವ ಆರೋಪಿ ನವೀನ್ಕುಮಾರ್ 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದಾನೆ. ಹಣಕಾಸಿನ ಮುಗ್ಗಟ್ಟಿನಿಂದಾಗಿ ಈ ಕೃತ್ಯಕ್ಕೆ ಯತ್ನಿಸಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯ ಸಾಹಸಕ್ಕೆ ಪೊಲೀಸರು ಹಾಗೂ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>