ಸಾರ್ವಜನಿಕ ಕಾರ್ಯಕ್ರಮವನ್ನು ಮುಗಿಸಿ ಲಚ್ಚಿವಾಲಾ ಮಾರ್ಗವಾಗಿ ವಾಪಸ್ಸಾಗುತ್ತಿದ್ದಾಗ ರಸ್ತೆ ಬದಿಯಲ್ಲಿ ಮಲಗಿದ್ದ ವ್ಯಕ್ತಿಯನ್ನು ನೋಡಿದ್ದಾರೆ. ಈ ವೇಳೆ ವ್ಯಕ್ತಿ ಪ್ರಜ್ಞೆ ತಪ್ಪಿರುವುದನ್ನು ಗಮನಿಸಿದ ಅವರು, ವ್ಯಕ್ತಿಯನ್ನು ತಮ್ಮ ಬೆಂಗಾವಲು ಸಿಬ್ಬಂದಿಯ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.