ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋರಕ್ಷಣೆ: ಜನರು ಕಾನೂನು ಕೈಗೆತ್ತಿಕೊಳ್ಳಬಾರದು

Last Updated 2 ಜುಲೈ 2017, 11:11 IST
ಅಕ್ಷರ ಗಾತ್ರ

ಲಖನೌ: ಗೋರಕ್ಷಣೆಯ ಹೆಸರಲ್ಲಿ ಹಿಂಸಾಚಾರ ಸಲ್ಲದು. ಗೋರಕ್ಷಣೆಗಾಗಿ ಜನರು ಕಾನೂನು ಕೈಗೆತ್ತಿಕೊಳ್ಳಬಾರದು. ಒಂದು ವೇಳೆ ಹಾಗೆ ಮಾಡಿದರೆ ನಮ್ಮ ಸರ್ಕಾರ ಯಾರನ್ನೂ ಸುಮ್ಮನೆ ಬಿಡುವುದಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ ಯೋಗಿ ಹೇಳಿದ್ದಾರೆ.

ಇತ್ತೀಚೆಗೆ ಝೀ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಆದಿತ್ಯನಾಥ, ಸರ್ಕಾರ ತಮ್ಮ ಕೆಲಸಗಳನ್ನು ಮಾಡುತ್ತಿದೆ. ಯಾರೊಬ್ಬರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು.

ಅಮಾಯಕ ವ್ಯಕ್ತಿಗಳ ಮೇಲೆ ಹಿಂಸೆ ನಡೆಯಬಾರದು ಎಂದು ನಾವು ಬಯಸುತ್ತೇವೆ. ಒಂದು ವೇಳೆ ಯಾರಾದರೂ ಅಪರಾಧ ಕೃತ್ಯ ಅಥವಾ ಮಾಫಿಯಾದಲ್ಲಿ ತೊಡಗಿದ್ದರೆ ಅವರ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT