ಜುಲೈ 4ರಂದು ಸಾಕ್ಷಿಗಳನ್ನು ವಿಚಾರಣೆಗೆ ಹಾಜರುಪಡಿಸಬೇಕು ಎಂದು ಮಾರ್ಚ್ 17ರಂದು ಸಮನ್ಸ್ ಹೊರಡಿಸಲಾಗಿತ್ತು. ಹರಿಯಾಣ ನ್ಯಾಯಾಲಯದಲ್ಲಿ ಮಂಗಳವಾರ (ಜು.4) ನಡೆಯಲಿರುವ ವಿಚಾರಣೆಯ ಸಂದರ್ಭದಲ್ಲಿ ಪಾಕಿಸ್ತಾನದ ಅಧಿಕಾರಿಗಳ ನಿರ್ಧಾರದ ಬಗ್ಗೆ ಎನ್ಐಎ ವಕೀಲರು ವಿಶೇಷ ನ್ಯಾಯಾಲಯಕ್ಕೆ ಮಾಹಿತಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.