ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಪದಾಧಿಕಾರಿಗಳು, ವಾಯುವಿಹಾರಿಗಳು, ಶಾಲಾ ಮಕ್ಕಳು ಹಾಗೂ ಶಿಕ್ಷಕರು ಗಿಡಗಳನ್ನು ನೆಟ್ಟು ನೀರೆರೆದರು.
ಬಿಬಿಎಂಪಿ ಸದಸ್ಯೆ ಜಯಲಕ್ಷ್ಮಮ್ಮ ಪಿಳ್ಳಪ್ಪ, ‘ಕೆರೆಯ ಆವರಣದಲ್ಲಿ ಅರಳಿ, ನೇರಳೆ, ಬೇವು, ಹೊಂಗೆ, ಮಹಾಗನಿ ಹಾಗೂ ಔಷಧೀಯ ಸಸ್ಯಗಳು ಸೇರಿದಂತೆ ಒಂದು ಸಾವಿರ ಗಿಡಗಳನ್ನು ನೆಡಲಾಗುತ್ತದೆ’ ಎಂದು ತಿಳಿಸಿದರು.