ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಚಾರಿ ಪೊಲೀಸರಿಗೆ ಮುಖಗವಸು ವಿತರಣೆ

Last Updated 2 ಜುಲೈ 2017, 19:58 IST
ಅಕ್ಷರ ಗಾತ್ರ

ಬೆಂಗಳೂರು: ಕರಾವಳಿ ಜನಕೂಟ ಸಂಘವು ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕೆ.ಆರ್‌.ಪುರ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿಗೆ ಮುಖಗವಸುಗಳನ್ನು ವಿತರಣೆ ಮಾಡಲಾಯಿತು.

ಸಂಚಾರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌  ಸಂಜೀವ್‌ ರಾಯಪ್ಪ ಮಾತನಾಡಿ, ‘ಜನಸಾಮಾನ್ಯರು, ಸಂಘ–ಸಂಸ್ಥೆಗಳು ಪೊಲೀಸರ ಕೆಲಸಕ್ಕೆ ಸಹಕಾರ ನೀಡಬೇಕು. ಅವರನ್ನು ಪ್ರೋತ್ಸಾಹಿಸಿದರೆ   ಮತ್ತಷ್ಟು ಚೆನ್ನಾಗಿ ಕೆಲಸ ಮಾಡುತ್ತಾರೆ’ ಎಂದರು.

ಕರಾವಳಿ ಜನಕೂಟದ ಅಧ್ಯಕ್ಷ ಜಯಸಾಲಿಯಾನ ಮಾತನಾಡಿ, ‘ನಿತ್ಯ ಕೆ.ಆರ್‌.ಪುರ ಮಾರ್ಗವಾಗಿ ಲಕ್ಷಾಂತರ ವಾಹನಗಳು ಸಂಚರಿಸುತ್ತವೆ. ಈ ಮಾರ್ಗದಲ್ಲಿ ಸಂಚಾರ ವ್ಯವಸ್ಥೆ ಸುಗಮವಾಗಿದ್ದರೆ ಅದಕ್ಕೆ ಪೊಲೀಸರ ಶ್ರಮವೇ ಕಾರಣ. ಮಳೆ, ಬಿಸಿಲು, ದೂಳಿನಿಂದ ಪೊಲೀಸರ ಜೀವಕ್ಕೆ ಆಪತ್ತು ಬರುತ್ತಿದೆ. ಹೀಗಾಗಿ ಸಂಚಾರ ಪೊಲೀಸರಿಗೆ ಮುಖಗವಸುಗಳನ್ನು ವಿತರಿಸುತ್ತಿದ್ದೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT