ಬೆಂಗಳೂರು: ಹಿಂದಿ ಹೇರಿಕೆ ಮೇಲಿನ ಹೋರಾಟ ತೀವ್ರಗೊಂಡ ಕಾರಣ ಮೆಜೆಸ್ಟಿಕ್ನ ಕೆಂಪೇಗೌಡ ಮೆಟ್ರೊ ಇಂಟರ್ಚೇಂಜ್ ನಿಲ್ದಾಣದ ಸಿಬ್ಬಂದಿ ಇಲ್ಲಿ ಹಿಂದಿಯಲ್ಲಿ ಬರೆದಿದ್ದ ನಾಮಫಲಕದ ಮೇಲೆ ಸ್ಟಿಕ್ಕರ್ ಅಂಟಿಸಿ, ಮರೆಮಾಚುವಂತೆ ಮಾಡಿದ್ದಾರೆ.
‘ಮೆಟ್ರೊದಲ್ಲಿ ಹಿಂದಿ ಬಳಕೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ದಾಳಿ ನಡೆಸಲು ಸಿದ್ಧತೆ ಮಾಡಿದ್ದಾರೆ. ಅವರು ದಾಳಿ ನಡೆಸಿದರೆ ಕಾನೂನು ಸುವ್ಯವಸ್ಥೆ ಕಾಪಾಡಲು ಸಮಸ್ಯೆಯಾಗುತ್ತದೆ. ಹಾಗಾಗಿ ನೀವೇ ಹಿಂದಿ ಫಲಕವನ್ನು ಅಳಿಸಿ ಎಂದು ಪೊಲೀಸ್ ಅಧಿಕಾರಿಗಳು ಸೂಚನೆ ನೀಡಿದ್ದರು. ಹಾಗಾಗಿ ಹಿಂದಿ ನಾಮಫಲಕಕ್ಕೆ ಸ್ಟಿಕ್ಕರ್ ಅಂಟಿಸಿದ್ದೇವೆ’ ಎಂದು ನಿಲ್ದಾಣದ ಸಿಬ್ಬಂದಿಯೊಬ್ಬರು ತಿಳಿಸಿದರು.
ಈ ನಿಲ್ದಾಣದ ಬಳಿ ಮೀಸಲು ಪೊಲೀಸ್ ಪಡೆಯ ತುಕಡಿಯನ್ನೂ ನಿಯೋಜಿಸಲಾಗಿದೆ.