ಇದಕ್ಕೆ ಪ್ರತಿಯಾಗಿ ಬಿಜೆಪಿ ಕಾರ್ಯಕರ್ತರು ಜೆಡಿಎಸ್ ಮೇಲೆ ಪ್ರತ್ಯಾರೋಪ ಮಾಡಿದರು. ಇದರಿಂದ ಮಾತಿನ ಚಕಮಕಿ ನಡೆದು, ಪರಿಸ್ಥಿತಿ ಉದ್ವಿಗ್ನಗೊಂಡಿತು. ಮಧ್ಯ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಕಾಂಗ್ರೆಸ್ನಿಂದ ಬಿ.ಕೆ.ಪ್ರಕಾಶ್, ಜೆಡಿಎಸ್ನಿಂದ ಎಸ್ಬಿಎಂ ಮಂಜು, ಬಿಜೆಪಿಯಿಂದ ಕೆ.ಮಾದೇಶ್ ಸ್ಪರ್ಧಾ ಕಣದಲ್ಲಿದ್ದಾರೆ. ಜುಲೈ 5ರಂದು ಮಹಾರಾಜ ಸಂಸ್ಕೃತ ಪಾಠಶಾಲೆಯಲ್ಲಿ ಮತ ಎಣಿಕೆ ನಡೆಯಲಿದೆ.