ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂಬಳ: ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ

Last Updated 3 ಜುಲೈ 2017, 20:08 IST
ಅಕ್ಷರ ಗಾತ್ರ

ನವದೆಹಲಿ: ಕಂಬಳಕ್ಕೆ ಸಂಬಂಧಿಸಿ­ದಂತೆ ರಾಜ್ಯ ಸರ್ಕಾರ ಹೊರಡಿ­ಸಿದ್ದ ಸುಗ್ರೀವಾಜ್ಞೆಗೆ ಸೋಮವಾರ ರಾಷ್ಟ್ರಪತಿಗಳ ಅಂಕಿತ ದೊರೆತಿದೆ.

ಕರಾವಳಿ ಭಾಗದಲ್ಲಿ ಸಾಂಪ್ರದಾಯಿಕ ಕ್ರೀಡೆಯಾಗಿರುವ ಕಂಬಳಕ್ಕೆ ಅಡ್ಡಿಯಾಗಿದ್ದ ಪ್ರಾಣಿ ಹಿಂಸೆ ತಡೆ ಕಾಯ್ದೆಗೆ ತಿದ್ದುಪಡಿ ತರುವ ನಿಟ್ಟಿನಲ್ಲಿ ರಾಜ್ಯ ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಮಂಡಿಸಿ ರಾಷ್ಟ್ರಪತಿಯವರ ಅಂಕಿತಕ್ಕಾಗಿ  ಕಳುಹಿಸಿ­ಕೊಡಲಾಗಿತ್ತು.

ನಿಯಮಗಳಲ್ಲಿ ಕೆಲವು ನ್ಯೂನತೆ­ಗಳಿದ್ದುದರಿಂದ ಕೇಂದ್ರದ ಗೃಹ ಸಚಿವಾಲಯದ ಸಲಹೆಯ ಮೇರೆಗೆ ರಾಜ್ಯ ಸರ್ಕಾರವು,  ಜಲ್ಲಿಕಟ್ಟು ಪುನರಾರಂಭಕ್ಕೆ ರೂಪಿಸಿದ ಮಾದರಿಯಲ್ಲಿಯೇ ನಿಯಮ­ಗಳನ್ನು ರೂಪಿಸಿ ಮಸೂದೆಯನ್ನು ಮರಳಿ ಅನುಮೋದನೆಗೆ ಕಳುಹಿಸಿತ್ತು. ಏತನ್ಮಧ್ಯೆ ಸರ್ಕಾರ ಈ ಮಸೂದೆ ಜಾರಿಗಾಗಿ ಸುಗ್ರೀವಾಜ್ಞೆ ಹೊರಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT