ನವದೆಹಲಿ: ಕಂಬಳಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ಸೋಮವಾರ ರಾಷ್ಟ್ರಪತಿಗಳ ಅಂಕಿತ ದೊರೆತಿದೆ.
ಕರಾವಳಿ ಭಾಗದಲ್ಲಿ ಸಾಂಪ್ರದಾಯಿಕ ಕ್ರೀಡೆಯಾಗಿರುವ ಕಂಬಳಕ್ಕೆ ಅಡ್ಡಿಯಾಗಿದ್ದ ಪ್ರಾಣಿ ಹಿಂಸೆ ತಡೆ ಕಾಯ್ದೆಗೆ ತಿದ್ದುಪಡಿ ತರುವ ನಿಟ್ಟಿನಲ್ಲಿ ರಾಜ್ಯ ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಮಂಡಿಸಿ ರಾಷ್ಟ್ರಪತಿಯವರ ಅಂಕಿತಕ್ಕಾಗಿ ಕಳುಹಿಸಿಕೊಡಲಾಗಿತ್ತು.
ನಿಯಮಗಳಲ್ಲಿ ಕೆಲವು ನ್ಯೂನತೆಗಳಿದ್ದುದರಿಂದ ಕೇಂದ್ರದ ಗೃಹ ಸಚಿವಾಲಯದ ಸಲಹೆಯ ಮೇರೆಗೆ ರಾಜ್ಯ ಸರ್ಕಾರವು, ಜಲ್ಲಿಕಟ್ಟು ಪುನರಾರಂಭಕ್ಕೆ ರೂಪಿಸಿದ ಮಾದರಿಯಲ್ಲಿಯೇ ನಿಯಮಗಳನ್ನು ರೂಪಿಸಿ ಮಸೂದೆಯನ್ನು ಮರಳಿ ಅನುಮೋದನೆಗೆ ಕಳುಹಿಸಿತ್ತು. ಏತನ್ಮಧ್ಯೆ ಸರ್ಕಾರ ಈ ಮಸೂದೆ ಜಾರಿಗಾಗಿ ಸುಗ್ರೀವಾಜ್ಞೆ ಹೊರಡಿಸಿತ್ತು.