‘ಒತ್ತುವರಿ ಬಗ್ಗೆ ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ತಹಶೀಲ್ದಾರ್, ವೈಟ್ಫೀಲ್ಡ್ ಹಾಗೂ ಕಾಡುಗೋಡಿ ಕಂದಾಯ ನಿರೀಕ್ಷಕರು ಬಿಲ್ಡರ್ಗಳ ಜತೆ ಶಾಮೀಲಾಗಿದ್ದಾರೆ. ಕೂಡಲೇ ಅವರನ್ನು ಸೇವೆಯಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿದರು. ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ ಕಾರಣಕ್ಕೆ ಪೊಲೀಸರು ಅವರನ್ನು ವಶಕ್ಕೆ ಪಡೆದರು.