ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವಕನಿಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ

Last Updated 5 ಜುಲೈ 2017, 12:19 IST
ಅಕ್ಷರ ಗಾತ್ರ

ಕಲಬುರ್ಗಿ: ಮೂವರು ದುಷ್ಕರ್ಮಿಗಳು ಯುವಕನೊಬ್ಬನನ್ನು ಅಪಹರಿಸಿ, ಸೀಮೆ ಎಣ್ಣೆ ಸುರಿದು, ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ್ದಾರೆ.

ಕೊಲೆ ಯತ್ನದಿಂದ ಯುವಕ ಪಾರಾಗಿದ್ದು, ಇಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಂಜ್ ಪ್ರದೇಶದ ಶೇಖ್ ಮಹಮ್ಮದ್ ಅಬ್ದುಲ್ ಹಮೀದ್ ಅಪಹರಣಕ್ಕೆ ಒಳಗಾದ ಯುವಕ. ಈತ ಸಾಮಿಲ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ.

ವಿಳಾಸ ಕೇಳುವ ನೆಪದಲ್ಲಿ ಬೈಕ್‌ನಲ್ಲಿ ಬಂದ ಮೂವರು ಯುವಕರು ಈತನನ್ನು ತಮ್ಮ ಬೈಕ್ ಮೇಲೆ ಕರೆದೊಯ್ದಿದ್ದಾರೆ. ಇಲ್ಲಿನ ಹಾಗರಗಾ ರಸ್ತೆಯ ಇನಾಮದಾರ ಕಾಲೇಜು ಬಳಿ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದಾರೆ.

ಯುವಕ ಚೀರಲು ಆರಂಭಿಸಿದಾಗ ಜನ ಸೇರುವುದನ್ನು ಅರಿತ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ವಿಶ್ವವಿದ್ಯಾಲಯ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT