ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್‌ನಲ್ಲಿ ಬಲಾತ್ಕಾರವಾಗಿ ಮಹಿಳೆ ಚುಂಬಿಸಿದ ಬಿಜೆಪಿ ನಾಯಕ ಸೆರೆ

Last Updated 5 ಜುಲೈ 2017, 20:08 IST
ಅಕ್ಷರ ಗಾತ್ರ

ಮುಂಬೈ: ಜೂನ್‌ 27 ರಂದು  ಸುವಿಹಾರಿ ಬಸ್‌ನಲ್ಲಿ ಪ್ರಯಾಣಿಸುವಾಗ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಚುಂಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ  ರವೀಂದ್ರ ಬವಂಥಾಡೆ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಗಡ್‌ಚಿರೋಳಿಯಿಂದ ನಾಗಪುರ ನಡುವೆ ಸಂಚರಿಸುವ ಬಸ್‌ನಲ್ಲಿ ಈ ಘಟನೆ ನಡೆದಿದೆ. ಚುಂಬನದ ದೃಶ್ಯವನ್ನು ವಾಹನದ ಚಾಲಕ ಮತ್ತು ಕ್ಲೀನರ್‌ ತಮ್ಮ ಮೊಬೈಲ್‌ ಪೋನಿನಲ್ಲಿ ವಿಡಿಯೊ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಮಹಿಳೆಯು ರವೀಂದ್ರ ಅವರ ವಿರುದ್ಧ ದೂರು ದಾಖಲಿಸಿದ್ದಾರೆ.  

ಪೊಲೀಸರು ಅತ್ಯಾಚಾರ ಸೇರಿದಂತೆ ಇತರ ಆರೋಪಗಳ ಅಡಿ ದೂರು ದಾಖಲಿಸಿಕೊಂಡು ರವೀಂದ್ರ ಅವರನ್ನು ಬಂಧಿಸಿದ್ದಾರೆ. ವಿಡಿಯೊ ಚಿತ್ರೀಕರಣ ಮಾಡಿಕೊಂಡಿರುವ ಚಾಲಕ ಹಾಗೂ ಕ್ಲೀನರ್‌  ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT