ಹುಬ್ಬಳ್ಳಿ: ನಗರದ ಹೊರವಲಯದ ಪುನಾ– ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವರೂರ ಕ್ರಾಸ್ ಬಳಿ ಮಾಜಿ ಸಚಿವ ಬಸವರಾಜ ಹೊರಟ್ಟಿ ಪಾರ್ಮ್ ಹೌಸ್ನ ಕೆರೆಗೆ ಖಾಸಗಿ ಬಸ್ ಉರುಳಿ ಬಿದ್ದಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಬಸ್ ಬೆಂಗಳೂರಿನಿಂದ ಮುಂಬೈಗೆ ಹೊರಟಿತ್ತು. ಬಸ್ನಲ್ಲಿದ್ದ 30 ಪ್ರಯಾಣಿಕರಲ್ಲಿ ಹಲರಿಗೆ ಸಣ್ಣ ಪುಟ್ಟಗಾಯ ಗಾಯಗಳಾಗಿವೆ.
ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಅವಘಡ ಸಂಭವಿಸಿದ್ದು, ದೊಡ್ಡ ಪ್ರಮಾಣದ ದುರಂತವೊಂದು ತಪ್ಪಿದೆ.
ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.