ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆ ಕೊರತೆ ಇರುವ ಕಾರಣ ಜವಾಬ್ದಾರಿಯುತ ಸರ್ಕಾರವಾಗಿ ಮೋಡಬಿತ್ತನೆ ಕೈಗೊಳ್ಳಲಾಗುತ್ತಿದೆ. ವಿದೇಶದಿಂದ ಮೂರು ರೇಡಾರ್ ಹಾಗೂ ಎರಡು ವಿಮಾನಗಳು ಬರಲಿವೆ. ಹುಬ್ಬಳ್ಳಿ ಹಾಗೂ ಬೆಂಗಳೂರು ವಿಮಾನನಿಲ್ದಾಣಗಳಿಂದ ಕಾರ್ಯಾಚರಣೆ ನಡೆಸಲಿವೆ ಎಂದರು.