ಈಗಾಗಲೇ ಶೇ 80ರಷ್ಟು ಬೆಳೆಗಳು ಬಿತ್ತನೆಯಾಗಿದ್ದು, ಮೊಳಕೆಯೊಡೆದಿದ್ದ ಬೆಳೆಗಳು ನೀರಿನ ಅಭಾವದಿಂದಾಗಿ ಒಣಗಲಾರಂಭಿಸಿವೆ. ಮಳೆಗಾಗಿ ಆಕಾಶ ದತ್ತ ನೋಡುವ ಸ್ಥಿತಿ ರೈತರಿಗೆ ಒದಗಿದೆ. ಜೂನ್ ತಿಂಗಳಲ್ಲಿ ಉತ್ತಮ ಮಳೆಯಾಗಿದ್ದರಿಂದ ಬಿತ್ತನೆ ನಿರೀಕ್ಷೆಗೂ ಮೀರಿ ನಡೆದಿದೆ. ಆದರೆ, ಈಗ ಬೆಳೆಗಳು ಮಳೆ ಇಲ್ಲದೆ ಬಾಡಿವೆ. ರೈತರು ಕೈಯಲ್ಲಿದ್ದ ಹಣವನ್ನು ಗೊಬ್ಬರ, ಬಿತ್ತನೆ ಬೀಜಕ್ಕಾಗಿ ಸುರಿದು ಆತಂಕಕ್ಕೆ ಒಳಗಾಗಿದ್ದಾರೆ.