<p><strong>ಬೆಂಗಳೂರು: </strong>‘ಕೆರೆಗೆ ಕಟ್ಟಡ ತ್ಯಾಜ್ಯಗಳನ್ನು ಸುರಿಯುತ್ತಿರುವುದು ತಿಳಿದು ಯಾವುದೇ ಕ್ರಮಕೈಗೊಳ್ಳದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಎಚ್ಚರಿಕೆ ನೀಡಿದರು.<br /> <br /> ವಿಕಾಸ್ ಸಂಘಟನೆ ನೀಡಿದ ದೂರಿನ ಮೇರಿಗೆ ಕೆ.ಆರ್.ಪುರ ಕ್ಷೇತ್ರದ ವಿಭೂತಿಪುರ, ದೊಡ್ಡನೆಕ್ಕುಂದಿ ಹಾಗೂ ಚಿನ್ನಪ್ಪನಹಳ್ಳಿ ಕೆರೆಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.<br /> <br /> ‘ವಿಭೂತಿಪುರ ಕೆರೆ ಅಂಗಳದಲ್ಲಿ ಕೆರೆಗೆ ಅಳವಡಿಸಿರುವ ತಂತಿ ಬೇಲಿ ಹಾಗೂ ಗೇಟನ್ನು ಮುರಿದು ತ್ಯಾಜ್ಯ ಸುರಿಯುತ್ತಿದ್ದಾರೆ. ಈ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಕ್ರಮಕೈಗೊಳ್ಳಲಿಲ್ಲ’ ಎಂದು ಅವರು ಲೋಕಾಯುಕ್ತರಿಗೆ ದೂರಿದರು.<br /> <br /> ‘ರಾತ್ರೋರಾತ್ರಿ ಕೆರೆಗೆ ತ್ಯಾಜ್ಯ ತಂದು ಸುರಿಯುತ್ತಿದ್ದಾರೆ. ಅಲ್ಲದೇ ಇಲ್ಲಿಗೆ ಬರುವ ಟ್ರಾಕ್ಟರ್ಗಳಿಗೆ ನಂಬರ್ ಪ್ಲೇಟ್ಗಳೇ ಇರುವುದಿಲ್ಲ. ಕೆರೆಯ ಸುತ್ತ ಹಾಕಿರುವ ತಂತಿಬೇಲಿಯನ್ನೂ ಹಾಳು ಮಾಡಿದ್ದಾರೆ. ಶೀಘ್ರ ಈ ಬಗ್ಗೆ ಗಮನ ಹರಿಸಿ, ಕೆರೆಯನ್ನು ಸಂರಕ್ಷಿಸಬೇಕು’ ಎಂದು ಸ್ಥಳೀಯರು ಮನವಿ ಮಾಡಿದರು.<br /> <br /> ಕೆರೆ ಅಭಿವೃದ್ಧಿ ಕುರಿತು ಮತ್ತಷ್ಟು ಚರ್ಚಿಸಲು 19 ರಂದು ಸಭೆ ಕರೆಯಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪಾಲ್ಗೊಳ್ಳವಂತೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಕೆರೆಗೆ ಕಟ್ಟಡ ತ್ಯಾಜ್ಯಗಳನ್ನು ಸುರಿಯುತ್ತಿರುವುದು ತಿಳಿದು ಯಾವುದೇ ಕ್ರಮಕೈಗೊಳ್ಳದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಎಚ್ಚರಿಕೆ ನೀಡಿದರು.<br /> <br /> ವಿಕಾಸ್ ಸಂಘಟನೆ ನೀಡಿದ ದೂರಿನ ಮೇರಿಗೆ ಕೆ.ಆರ್.ಪುರ ಕ್ಷೇತ್ರದ ವಿಭೂತಿಪುರ, ದೊಡ್ಡನೆಕ್ಕುಂದಿ ಹಾಗೂ ಚಿನ್ನಪ್ಪನಹಳ್ಳಿ ಕೆರೆಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.<br /> <br /> ‘ವಿಭೂತಿಪುರ ಕೆರೆ ಅಂಗಳದಲ್ಲಿ ಕೆರೆಗೆ ಅಳವಡಿಸಿರುವ ತಂತಿ ಬೇಲಿ ಹಾಗೂ ಗೇಟನ್ನು ಮುರಿದು ತ್ಯಾಜ್ಯ ಸುರಿಯುತ್ತಿದ್ದಾರೆ. ಈ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಕ್ರಮಕೈಗೊಳ್ಳಲಿಲ್ಲ’ ಎಂದು ಅವರು ಲೋಕಾಯುಕ್ತರಿಗೆ ದೂರಿದರು.<br /> <br /> ‘ರಾತ್ರೋರಾತ್ರಿ ಕೆರೆಗೆ ತ್ಯಾಜ್ಯ ತಂದು ಸುರಿಯುತ್ತಿದ್ದಾರೆ. ಅಲ್ಲದೇ ಇಲ್ಲಿಗೆ ಬರುವ ಟ್ರಾಕ್ಟರ್ಗಳಿಗೆ ನಂಬರ್ ಪ್ಲೇಟ್ಗಳೇ ಇರುವುದಿಲ್ಲ. ಕೆರೆಯ ಸುತ್ತ ಹಾಕಿರುವ ತಂತಿಬೇಲಿಯನ್ನೂ ಹಾಳು ಮಾಡಿದ್ದಾರೆ. ಶೀಘ್ರ ಈ ಬಗ್ಗೆ ಗಮನ ಹರಿಸಿ, ಕೆರೆಯನ್ನು ಸಂರಕ್ಷಿಸಬೇಕು’ ಎಂದು ಸ್ಥಳೀಯರು ಮನವಿ ಮಾಡಿದರು.<br /> <br /> ಕೆರೆ ಅಭಿವೃದ್ಧಿ ಕುರಿತು ಮತ್ತಷ್ಟು ಚರ್ಚಿಸಲು 19 ರಂದು ಸಭೆ ಕರೆಯಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪಾಲ್ಗೊಳ್ಳವಂತೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>