ಬಿ.ಸಿ.ರೋಡ್ನಲ್ಲಿ ಶರತ್ ಅವರ ಲಾಂಡ್ರಿ ಎದುರು ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಡಾ.ಪ್ರಭಾಕರ ಭಟ್, ಹೂವಿನ ಹಾರ ಹಾಕಿ ಗೌರವ ಸಲ್ಲಿಸಿದರು. ನಂತರ ಬಂಟ್ವಾಳದತ್ತ ಮೆರವಣಿಗೆ ಸಾಗಿತು. ಹಿಂದಕ್ಕೆ ಮೆರವಣಿಗೆಯಲ್ಲಿದ್ದವರ ಮೇಲೆ ದೂರದಿಂದ ಕಲ್ಲೊಂದು ಬಿದ್ದಿದೆ. ಎಸೆದವರು ಯಾರು ಎಂಬುದು ಗೊತ್ತಾಗಿಲ್ಲ. ಇದರಿಂದ ಸಿಟ್ಟಿಗೆದ್ದ ಸಂಘ ಪರಿವಾರದ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಕೆಲವು ಮನೆಗಳು, ಅಂಗಡಿ ಮುಂಗಟ್ಟುಗಳು, ವಾಹನಗಳಿಗೆ ಕಲ್ಲು ತೂರಾಟದಿಂದ ಹಾನಿಯಾಗಿದೆ.