ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುಮತಿ ಇಲ್ಲದೆ ವರ್ತಕರ ಭೇಟಿಗೆ ಜಿಎಸ್‌ಟಿ ಅಧಿಕಾರಿಗಳಿಗೆ ಅಧಿಕಾರವಿಲ್ಲ: ಕೇಂದ್ರ ಸರ್ಕಾರ

Last Updated 8 ಜುಲೈ 2017, 11:49 IST
ಅಕ್ಷರ ಗಾತ್ರ

ನವದೆಹಲಿ: ಅನುಮತಿ ಪಡೆಯದೆ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಬಂಧಿಸಿದಂತೆ ಇಲಾಖೆಯ ಯಾವುದೇ ಅಧಿಕಾರಿಯು ವರ್ತಕರನ್ನು ಸಂಪರ್ಕಿಸುವಂತಿಲ್ಲ ಎಂದು ಕೇಂದ್ರ ಸರ್ಕಾರ ಆದೇಶಿಸಿದೆ.

ಜಿಎಸ್‌ಟಿ ಅಧಿಕಾರಿಗಳೆಂದು ಹೇಳಿಕೊಂಡು ವರ್ತಕರ ಬಳಿ ಹಣ ವಸೂಲಿ ಮಾಡಿರುವ ಕುರಿತು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಈ ಸಂಬಂಧ ಜಿಎಸ್‌ಟಿ ದೆಹಲಿ ವಲಯದ ಮುಖ್ಯ ಆಯುಕ್ತರ ಕಚೇರಿಯಿಂದ ಪ್ರಕಟಣೆ ಹೊರಡಿಸಲಾಗಿದ್ದು, ವರ್ತಕರು ಹಾಗೂ ವ್ಯಾಪಾರೀ ಕೇಂದ್ರಗಳಿಗೆ ಅನುಮತಿಯಿಲ್ಲದೆ ಇಲಾಖೆಯ ಯಾವುದೇ ಅಧಿಕಾರಿ ಭೇಟಿ ನೀಡುವಂತಿಲ್ಲ ಎಂದಿದೆ.

ವರ್ತಕರಿಗೆ ಜಿಎಸ್‌ಟಿ ಅಳವಡಿಕೆಯಲ್ಲಿ ಸುಲಭವಾಗಿಸುವ ನಿಟ್ಟಿನಲ್ಲಿ ಇಲಾಖೆ ಕಾರ್ಯನಿರ್ವಹಿಸಲಿದೆ. ಈ ಸಂಬಂಧ ವ್ಯಾಪಾರಿಗಳು ಯಾವುದೇ ರೀತಿಯ ತೊಂದರೆ ಎದುರಾದರೆ ದೂರು ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT