ಮುಂದಿನ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಯತೀಂದ್ರ ಕಣಕ್ಕಿಳಿಯುವ ಕುರಿತು ಊಹಾಪೋಹ ಹರಡಿದೆ. ಸಿದ್ದರಾಮಯ್ಯ ಮತ್ತೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಒಂದು ವರ್ಷದಿಂದ ವರುಣಾ ಕ್ಷೇತ್ರದಲ್ಲಿ ಯತೀಂದ್ರ ಸುತ್ತಾಡುತ್ತಿದ್ದಾರೆ. ಅಲ್ಲದೆ, ಅವರನ್ನು ಈ ಕ್ಷೇತ್ರದ ಜಾಗೃತಿ ಸಮಿತಿ ಅಧ್ಯಕ್ಷರಾಗಿ ಸರ್ಕಾರ ಇತ್ತೀಚೆಗೆ ನೇಮಿಸಿದೆ.