ಈ ಸಾಲಿನಲ್ಲಿ ಶೇ 45ರಷ್ಟು ಮಳೆ ಕೊರತೆ ಉಂಟಾಗಿದೆ. ಏಪ್ರಿಲ್, ಮೇನಲ್ಲಿ ಆಶಾವಾದ ಮೂಡಿಸಿದ್ದ ಮಳೆ ಬಳಿಕ ಕೈಕೊಟ್ಟಿದೆ. ಬಿತ್ತನೆಯಾಗಿರುವ ಬೆಳೆಗಳು ಬಾಡುತ್ತಿವೆ. ಹೀಗಾಗಿ, ಮುಂದಿನ ದಿನಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು, ಕೃಷಿ ಹಾಗೂ ಕೆರೆ–ಕಟ್ಟೆಗಳ ಭರ್ತಿಗೆ ಕೊರತೆ ಉಂಟಾಗುವ ಸಾಧ್ಯತೆ ಇದೆ. ಕೆರೆ, ನಾಲೆಗಳಿಗೆ ಇನ್ನೂ ನೀರು ತಲುಪಿಲ್ಲ.