ಜಮ್ಮು: ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆ ವ್ಯಾಪ್ತಿಯ ಅತಂರ ರಾಷ್ಟ್ರೀಯ ಗಡಿಯಲ್ಲಿ ಶನಿವಾರ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ ಪಾಕಿಸ್ತಾನ ಸೇನೆಗೆ ಪ್ರತ್ಯುತ್ತರ ನೀಡಿರುವ ಭಾರತಿಯ ಸೇನೆ ಇಬ್ಬರು ಪಾಕ್ ಸೈನಿಕರನ್ನು ಹೊಡೆದುರುಳಿಸಿದೆ.
ಪೂಂಚ್ ಜಿಲ್ಲೆ ವ್ಯಾಪ್ತಿಯಲ್ಲಿ ಸೇನಾ ನೆಲೆಗಳು ಮತ್ತು ಗ್ರಾಮಗಳನ್ನು ಗುರಿಯಾಗಿರಿಸಿ ಪಾಕಿಸ್ತಾನ ಸೇನೆ ಶನಿವಾರ ನಡೆಸಿದ್ದ ದಾಳಿಯಲ್ಲಿ ಭಾರತೀಯ ಸೇನೆಯ ಒಬ್ಬ ಯೋಧ ಮತ್ತು ಯೋಧನ ಪತ್ನಿ ಮೃತಪಟ್ಟಿದ್ದಾರೆ.
ಪಾಕ್ ದಾಳಿಗೆ ಭಾರತೀಯ ಪಡೆ ಪ್ರತಿ ದಾಳಿ ನಡೆಸಿದ್ದು, ಇದರಲ್ಲಿ ಏಳು ಪಾಕಿಸ್ತಾನಿಯರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.