ಕೃತ್ಯ ಎಸಗಿದ ಬಳಿಕ ಪರಾರಿಯಾಗಿದ್ದ ಆರೋಪಿಯು ಮಥುರಾ ಮತ್ತು ವೃಂದಾವನದಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದ. ಬಳಿಕ ಮಹಾರಾಷ್ಟ್ರದಲ್ಲಿರುವ ಸಂಬಂಧಿಕರನ್ನು ಸಂಪರ್ಕಿಸಿದ್ದು, ಅವರ ನರೆವಿನಿಂದ ಧುಲೆ ಎಂಬಲ್ಲಿ ಕಾರ್ಖಾನೆಯೊಂದರಲ್ಲಿ ಕೆಲಸಕ್ಕೆ ಸೇರಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕೃತ್ಯ ಎಸಗುವುದಕ್ಕೂ ಮುನ್ನ ಆತ ದೆಹಲಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಂದೂ ಪೊಲೀಸರು ತಿಳಿಸಿದ್ದಾರೆ.