ಗುರು ಪೂರ್ಣಿಮೆಯ ಅಂಗವಾಗಿ ಆದಿತ್ಯನಾಥ್ ಅವರು ಭಾನುವಾರ ಬೆಳಿಗ್ಗೆ 11 ಗಂಟೆಗೆ ಗೋರಖ್ಪುರದ ಮಂದಿರಕ್ಕೆ ಭೇಟಿ ನೀಡಿದ್ದರು. ನಂತರ ಅವರು ಅಲ್ಲಿ ಜನತಾ ದರ್ಬಾರ್ ನಡೆಸಿದ್ದಾರೆ. ಈ ವೇಳೆ, ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಅಹವಾಲು ಸಲ್ಲಿಸಲು ಅನೇಕ ಸಂಖ್ಯೆಯಲ್ಲಿ ಜನ ಬರತೊಡಗಿದ್ದಾರೆ. ಜನರನ್ನು ನಿಯಂತ್ರಿಸಲು ಸೂಕ್ತ ವ್ಯವಸ್ಥೆ ಇಲ್ಲದ್ದರಿಂದ ತಳ್ಳಾಟ, ನೂಕು–ನುಗ್ಗಲು ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.