ಕೃಷಿ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ‘ಹುಣಸಮಾರನಹಳ್ಳಿ ಭಾಗದಲ್ಲಿ ತಲೆಯೆತ್ತಿರುವ ನೂತನ ಬಡಾವಣೆಗಳಲ್ಲಿ ಸಣ್ಣ ಜಾಗದಲ್ಲಿ 3–4 ಅಂತಸ್ತಿನ ಕಟ್ಟಡಗಳನ್ನು ಕಟ್ಟಿಕೊಂಡಿದ್ದಾರೆ. ರಸ್ತೆ, ಪಾದಚಾರಿ ಮಾರ್ಗಕ್ಕೆ ಸರಿಯಾದ ಜಾಗ ಬಿಟ್ಟಿಲ್ಲ. ವಾಹನ ನಿಲುಗಡೆಗೂ ಅವಕಾಶವಿಲ್ಲ. ಹೀಗಾದರೆ ಮೂಲಸೌಲಭ್ಯಗಳನ್ನು ಒದಗಿಸುವುದು ಹೇಗೆ? ಈ ಬಗ್ಗೆ ಸಾರ್ವಜನಿಕರು ಆಲೋಚನೆ ಮಾಡಬೇಕು’ ಎಂದು ಸಲಹೆ ನೀಡಿದರು.