‘ಸ್ವಾತಂತ್ರ್ಯ ಸಿಕ್ಕಿ ಏಳು ದಶಕಗಳು ಕಳೆದರೂ ಲಂಬಾಣಿ ಸಮುದಾಯದ ಜನವಸತಿ ಪ್ರದೇಶಗಳನ್ನು ಇದುವರೆಗೂ ಕಂದಾಯ ಗ್ರಾಮಗಳಾಗಿ ಮಾರ್ಪಡಿಸಿಲ್ಲ. ಯಾರದ್ದೋ ಖಾಸಗಿ ಮಾಲೀಕತ್ವದ ಜಮೀನಿನಲ್ಲಿ, ಅರಣ್ಯ ಭೂಮಿಯಲ್ಲಿ ಹಾಗೂ ಬಗುರ್ಹುಕುಂ ಜಮೀನಿನಲ್ಲಿ ಅವರು ವಾಸಿಸುತ್ತಿದ್ದಾರೆ. ತಮ್ಮ ಮನೆಯ ಹಕ್ಕುಪತ್ರ ಯಾರ ಹೆಸರಿನಲ್ಲಿದೆ ಎಂಬ ಬಗ್ಗೆ ಸಮುದಾಯಗಳಿಗೆ ಮಾಹಿತಿ ಇಲ್ಲ’ ಎಂದು ರಾಷ್ಟ್ರೀಯ ಕಾನೂನು ಶಾಲೆಯ ಪ್ರಾಧ್ಯಾಪಕ ಪ್ರದೀಪ್ ರಮಾವತ್ ತಿಳಿಸಿದರು.