ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿಯಲ್ಲಿ ಒಳನುಸುಳುವ ಯತ್ನ ವಿಫಲ; ಮೂವರು ಉಗ್ರರ ಹತ್ಯೆಗೈದ ಸೇನೆ

Last Updated 10 ಜುಲೈ 2017, 9:39 IST
ಅಕ್ಷರ ಗಾತ್ರ

ಶ್ರೀನಗರ: ಉತ್ತರ ಕಾಶ್ಮೀರದ ನೌಗಾಮ್‌ ಜಿಲ್ಲೆ ವ್ಯಾಪ್ತಿಯ ಅಂತರರಾಷ್ಟ್ರೀಯ ಗಡಿಯಲ್ಲಿ ಭಾರತದೊಳಕ್ಕೆ ನುಸುಳುತ್ತಿದ್ದ ಉಗ್ರರ ಯತ್ನವನ್ನು ವಿಫಲಗೊಳಿಸಿರುವ ಭಾರತೀಯ ಸೇನೆ ಸೋಮವಾರ ಮೂವರು ಉಗ್ರರನ್ನು ಹತ್ಯೆ ಮಾಡಿದೆ. 

ನೌಗಾಮ್‌ ವಲಯದಲ್ಲಿ ಭಾನುವಾರ ರಾತ್ರಿ ಅನುಮಾನಾಸ್ಪದವಾಗಿ ಕಂಡು ಬಂದ ಉಗ್ರರ ಚಲನವಲನಗಳನ್ನು ಗಮನಿಸಿ, ಇಡೀ ರಾತ್ರಿ ಭದ್ರತಾ ಪಡೆ ಶೋಧ ನಡೆಸಿದೆ. ಸವಾಲಾಗಿ ಪರಿಣಮಿಸಿದ್ದ ಉಗ್ರರು ಸೋಮವಾರ ಬೆಳಗಿನಜಾವ ಪತ್ತೆಯಾಗಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಸೇನೆ ಉಗ್ರರ ವಿರುದ್ಧ ಗುಂಡಿನ ದಾಳಿ ನಡೆಸಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.
ಉಗ್ರರ ಗುಂಪು ಒಳನುಸುಳಲು ಸಾಧ್ಯವಾಗಲಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಲು ಅರಣ್ಯ ಪ್ರದೇಶದಲ್ಲಿ ಸೇನೆ ಕೂಂಬಿಂಗ್ ಕಾರ್ಯಾಚರಣೆ ನಡೆಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT