ಸೇನಾ ನೆಲೆಗಳ ಮೇಲೆ, ಪೊಲೀಸರ ಮೇಲೆ ದಾಳಿ ನಡೆಸಲು ಉಗ್ರರಿಗೆ ಸಂದೀಪ್ ನೆರವು ನೀಡುತ್ತಿದ್ದ. ಅದಕ್ಕಾಗಿ ಲಕ್ಷಾಂತರ ರೂಪಾಯಿಗಳನ್ನು ಕಳವು ಮಾಡಿದ್ದಲ್ಲದೆ, ಆಯುಧಗಳನ್ನೂ ಕದ್ದೊಯ್ಯುತ್ತಿದ್ದ ಎನ್ನಲಾಗಿದೆ. ಇತ್ತೀಚೆಗೆ ಕಾಶ್ಮೀರದ ಅನಂತ್ನಾಗ್ನಲ್ಲಿ ನಡೆದಿದ್ದ ಉಗ್ರ ದಾಳಿ, ಅಚ್ಬಲ್ನಲ್ಲಿ ಆರು ಪೊಲೀಸರ ಹತ್ಯೆಗೆ ಕಾರಣವಾಗಿದ್ದ ಉಗ್ರ ದಾಳಿಗಳಿಗೂ ಸಂದೀಪ್ ನೆರವು ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.